ಅರಿಯದೇ ಬರುವ ಮನದ ಪದಗಳ ಸಾಲೇ ಈ ಕಾವ್ಯ

January 12, 2009

ಬೇಸರ

ಕನಸಿನಲಿ ಬಂದ ರಾಜಕುಮಾರ 

ಬಂದಿರಲು ಸನಿಹ ಬೆಚ್ಚಿ ಬೆದರಿ

ನೋಡಿದ್ದೆ ಕುತೂಹಲದಲಿ

ನನ್ನ ಆತಂಕವನರಿತರೂ

ನನ್ನನುಮತಿಯನೂ ಕೇಳದೇ

ಮುಂಗುರುಳ ಸರಿಸಿ

ಚುಂಭಿಸಿದ್ದ ತುಟಿಗಳಿಗೆ

ರೂಪದಲಿ ಮನ್ಮಥನವ

ರತಿಯಾಗಿದ್ದೆ ನಾ ಕೆಲ ಸಮಯ

ನನ್ನನಾನೇ ಮರೆತು

ಬಿಟ್ಟ ಕಂಗಳ ಮುಚ್ಚದೆ

ನೋಡಿದ್ದೆ ಅವನಂದವ

ನನಗರಿವ ಕೊಡದೇ

ಸೋತಿತ್ತು ಮನ ಅವನಿಗೆ.

 ಒಮ್ಮೆ ಅವನೆದೆಗೆಒರಗಿ

ಹೃದಯ ಬಡಿತವ ಕೇಳುವಾಸೆ

ನನ್ನ ಮನದ ಮಾತ

ಅರಿತವನಂತೆ ಬರಸೆಳೆದು
ಬಾಹುವಿನಲಿ  ಅಪ್ಪಿ

ಮುತ್ತನಿತ್ತಿದ್ದ ಹಣೆಗೆ

ಎಂತಹ ರಸಿಕ ,ಮನಸೋತು

ಒರಗಿದ್ದೆ ಅವನೆದೆಗೆ

ಅವನೆದೆಯ ಬಿಸಿ ಉಸಿರ

ಡವಡವದಲಿ ನನ್ನೆದೆಯ ಬಡಿತ

ಜೋರಾಗುತಿರಲು

ಮನ ಎಚ್ಚರಿಸಿ ಬುದ್ಡಿ ಹೇಳಿ

ಬಿಡಿಸಿಕೊಳ್ಳ ಹೊರಟವಳಾ

ಕಿವಿಯಲ್ಲಿ ಪಿಸುರಿದ್ದ

ಹೋಗದಿರು ನಲ್ಲೇ ನನ್ನಿಂದ ದೂರ

ಪ್ರೀತಿಸಿರುವೆ ನಾನಿನ್ನ ಮನಸಿನಲೆ.

 ಮನಸಾರೆ ಮುದ್ದಿಸಿದೆ 

ಹೃದಯದಲೆ ಪೂಜಿಸಿದೆ

ಪ್ರೀತಿಸಿದೆ ,ಪ್ರೇಮಿಸಿದೆ

ಅವನಿಲ್ಲದೇ ನಾನಿಲ್ಲವಾಗಿ

ನನ್ನೇ ನಾ ಮರೆತಿರಲು

ಕಾಣದೆ ಮರೆಯಾಗಿದ್ದ
ಹೇಳದೇ ಕೇಳದೇ.

ಹುಡುಕಿದೆ

ದಮಯಂತಿ  ಮರೆಯಾದ ನಳನ ಹುಡುಕಿದಂತೆ,

ಕೂಗಿದೆ

ಗಂಟಲು ಕಿತ್ತು ಬರುವವರೆಗೆ,

ರೋಧಿಸಿದೆ

ಹೃದಯ ಬಡಿತ ನಿಲ್ಲಿಸುವಂತೆ

ಅತ್ತಿದ್ದೆ ಕಣ್ಣಲ್ಲಿ  ರಕ್ತ ಸೋರುವಂತೆ.

 
ಬೇಸರ ಗೊಂಡಿತ್ತು ಮನಸು

ಬಾರವಾಗಿತ್ತು ಹೃದಯ

ಸೂರ್ಯನ ಕಿರಣದ ಬೆಳಕು ಮೊಗವ

ತಗುಲಿ ಕನಸ ಎಚ್ಚರಿಸಿದರೂ

ಅಳುತಲೆ ಇದ್ದೇ ಮರೆಯಾದ

ರಾಜಕುಮಾರನ ನೆನಪಿನಲೆ.

2 Comments »

  1. ನಮಸ್ತೆ.. ನಾಡಿದ್ದು 8-03-2009 ರಂದು ನಡೆಯುವ ಅಮ್ಮನ ಹಬ್ಬಕ್ಕೆ ನಿಮ್ಮನ್ನು ಆಮಂತ್ರಿಸಲು ಬಂದೆ.. ದಯವಿಟ್ಟು ಬಿಡುವು ಮಾಡಿಕೊಂಡು ಬನ್ನಿ.. ವಿವರಗಳಿಗೆ ನನ್ನ ಬ್ಲಾಗ್ http://minchulli.wordpress.com ನೋಡಿ. ಮರೆಯದೆ ಬನ್ನಿ… ನಿಮ್ಮ ಆಪ್ತರಿಗೆಲ್ಲ ಈ ವಿಚಾರ ಹೇಳಿ ಸಾಧ್ಯವಾದರೆ ಕರೆದುಕೊಂಡು ಬನ್ನಿ. ನೀವು ಬಂದರೆ ತುಂಬಾ ಸಂತೋಷ ಆಗುತ್ತೆ.

    ಶುಭವಾಗಲಿ,
    - ಶಮ, ನಂದಿಬೆಟ್ಟ

    Comment by minchulli — March 2, 2009 @ 2:14 pm | Reply

  2. Adbhuthavagide dear kavya, e bhavanegalu preethinda dooravada prathiyobbara hrudayada badithavagiratte. Wish u all da very best.

    Comment by Amrutha — June 22, 2009 @ 5:56 am | Reply


RSS feed for comments on this post. TrackBack URI

Leave a comment

Blog at WordPress.com.